ಕಾಸರಗೋಡು : ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ಬಾಲಕಿ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬಂಗ್ರಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ ( 11) ಮೃತಪಟ್ಟವರು.
ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸಾಮಾಗ್ರಿ ತರಲೆಂದು ಮಂಜೇಶ್ವರಕ್ಕೆ ತಂದೆ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಮಂಜೇಶ್ವರ ಒಳರಸ್ತೆಯ ಗಿಳಿವಿಂಡು ಸಮೀಪ ಇವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಡಿಕ್ಕಿಯಿಂದ ಇಬ್ಬರು ರಸ್ತೆ ಬದಿಗೆ ಬಿದ್ದಿದ್ದು , ಗಂಭೀರ ಗಾಯಗೊಂಡ ದೀಪಿಕಾ ಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ ರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಳು . ತಂದೆ ರವಿಚಂದ್ರ ಗಾಯಗೊಂಡಿದ್ದು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಳು ತಾಯಿ ಮಂಗಳ, ಸಹೋದರಿ ದೀಕ್ಷಾ ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.. ದೀಪಿಕಾ ಬಂಗ್ರ ಮಂಜೇಶ್ವರ ಜಿ ಎಚ್ ಎಸ್ ಎಸ್ ನ ಆರನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.