ಕಾಸರಗೋಡು : ಕಾಸರಗೋಡು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಯಲ್ಲಿ ಹಂತ ಹಂತವಾಗಿ ಸ್ಪೆಸಲಿಸ್ಟ್ ಚಿಕಿತ್ಸಾ ಸೌಲಭ್ಯ ವನ್ನೂ ಕಲ್ಪಿಸಲಾಗುವುದು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದರು.
ಉಕ್ಕಿನ ಡ್ಕ ದಲ್ಲಿರುವ ಕಾಸರಗೋಡು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸಾ ಸೌಲಭ್ಯ ವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಆರೋಗ್ಯ ವಲಯದಲ್ಲಿ ಜಿಲ್ಲೆಯನ್ನು ಅತ್ಯುತ್ತಮ ವ್ಯವಸ್ಥೆ ಕಲ್ಪಿ ಸುವುದು ಸರಕಾರದ ಗುರಿಯಾಗಿದೆ ಎಂದು ಸಚಿವರು ಅಭಿಪ್ರಾಯ ಪಟ್ಟರು.
ಕಾಸರಗೋಡು ಶಾಸಕ ಎನ್. ಎ ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು.ಸಮಾರಂಭದಲ್ಲಿ ಆರೋಗ್ಯ ಇಲಾಖಾ ಮುಖ್ಯ ಕಾರ್ಯದರ್ಶಿ ಡಾ. ಆಶಾ ಥೋಮಸ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ .ಬೇಬಿ ಬಾಲಕೃಷ್ಣನ್ , ಉಪಾಧ್ಯಕ್ಷ ಶಾನ್ ವಾಜ್ ಪಾದೂರು, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಬಿ. ಶಾಂತಾ, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ರಮ್ಲಾ ಬೀವಿ, ಜಂಟಿ ನಿರ್ದೇಶಕ ಡಾ . ಥೋಮಸ್ ಮ್ಯಾಥ್ಯೂ, ವಿಶೇಷ ಅಧಿಕಾರಿ ಡಾ. ರೋಯ್, ಡಾ. ವಿ. ರಾಜೇಂದ್ರನ್ , ಕಾಸರಗೋಡು ವೈದ್ಯಕೀಯ ಕಾಲೇಜು ಮುಖ್ಯಸ್ಥ ಎಂ. ಬಿ ಆದರ್ಶ್, ಡಾ. ರಿಜಿತ್ ಮೊದಲಾದವರು ಉಪಸ್ಥಿತರಿದ್ದರು.