ಕಾಸರಗೋಡು : ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಕುಂಬಳೆ ನಿವಾಸಿಯೋರ್ವ ಓರ್ವ ಮೃತಪಟ್ಟು , ಇಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕಾ ಞ0ಗಾಡ್ ನಲ್ಲಿ ನಡೆದಿದೆ.
ಗಂಭೀರ ಗಾಯ ಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ . ರಾತ್ರಿ . 8. 30 ರ ಸುಮಾರಿಗೆ ಕಾ ಞ0ಗಾಡ್ ಸೌತ್ ನಲ್ಲಿ ಅಪಘಾತ ನಡೆದಿದೆ .
ಮೃತಪಟ್ಟವರನ್ನು ಕುಂಬಳೆ ಆರಿಕ್ಕಾಡಿಯ ಅಲಿ ( 32) ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಕುಂಬಳೆ ಯ ಅಲಿ ( 38) ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು , ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ . ಇಬ್ಬರೂ ಕಾರು ಪ್ರಯಾಣಿಕರಾಗಿದ್ದಾರೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಬಸ್ಸು ಪ್ರಯಾಣಿಕರಾದ ಐವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನೀಲೇಶ್ವರದಿಂದ ಕಾ ಞ0ಗಾಡ್ ಗೆ ಆಗಮಿಸುತ್ತಿದ್ದ ಬಸ್ಸು ಮತ್ತು ಕುಂಬಳೆಯಿಂದ ಕಣ್ಣೂರಿಗೆ ತೆರಳುತ್ತಿದ್ದ ಇನೋವಾ ಕಾರಿನ ನಡುವೆ ಅಪಘಾತ ನಡೆದಿದೆ .
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು , ಪೊಲೀಸರು , ನಾಗರಿಕರು ಕಾರಿನಲ್ಲಿ ಸಿಲುಕಿದವರನ್ನು ಹೊರ ತೆಗೆದು ಆಸ್ಪತ್ರೆಗೆ ತಲಪಿಸಿದರು . ಅಪಘಾತದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು
ಹೊಸದುರ್ಗ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು , ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ