ಕಾಸರಗೋಡು: ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್ ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ
ಸ್ವಗೃಹದಲ್ಲಿ ನಿಧನರಾದರು.ಅವರಿಗೆ ೮೫ ವರ್ಷ ವಯಸ್ಸಾಗಿತ್ತು.
ಜಾತಿ , ಮತ , ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ ೨೬೫ ರಷ್ಟು ನಿರ್ಮಿಸಿ ನೀಡುವ ಮೂಲಕ ಸೇವೆ ನೀಡಿದ್ದರು.
ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ . ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ ಅವರ ಅಪ್ರತಿಮ ಭಕ್ತರಾಗಿ ‘ಸಾಯಿರಾಂ ಭಟ್’ ಎಂದೇ ಖ್ಯಾತರಾಗಿದ್ದರು. ಕಿಳಿಂಗಾರಿನಲ್ಲಿ ಶ್ರೀ ಸಾಯಿ ಮಂದಿರವನ್ನು ಸ್ಥಾಪಿಸಿದ್ದರು. ಉಚಿತ ಆರೋಗ್ಯ ಶಿಬಿರ ಸಹಿತ ಆನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಮೃತರು ಪತ್ನಿ ಶಾರದಾ ಭಟ್, ಪುತ್ರ , ಬದಿಯಡ್ಕ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ , ಹಾಲಿ ಸದಸ್ಯ ಕೆ.ಎನ್. ಕೃಷ್ಣ ಭಟ್, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ