ಮಂಜೇಶ್ವರ : ಬೀಗ ಮುರಿದು ಗಲ್ಫ್ ಉದ್ಯೋಗಿಯ ಮನೆಯಿಂದ ಚಿನ್ನಾಭರಣ , ಕಾರು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇನ್ನೋರ್ವ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಬಾಲ ನಾರಾಯಣ ( ೫೪) ಬಂಧಿತ. ಕಳವು ಗೈದಿದ್ದ ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ . ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬಂಧಿತ ಉಪ್ಪಳದ ನಿತಿನ್ ಕುಮಾರ್ ನೀಡಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಈತನನ್ನು ಮುಂಬೈಯಿಂದ ಬಂಧಿಸಿ ಕಾರನ್ನು ವಶಪಡಿಸಿಕೊಂಡಿದೆ. ಪ್ರಕರಣದ ಉಳಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.