ಕಾಸರಗೋಡು : ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚೆರ್ವತ್ತೂರು ಮಟ್ಟಲಾಯಿ ಟೆಕ್ನಿಕಲ್ ಶಾಲಾ ಸಮೀಪ ಬುಧವಾರ ಸಂಜೆ ನಡೆದಿದ್ದು , ೧೫ ಮಂದಿ ಗಾಯಗೊಂಡಿದ್ದಾರೆ.
ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಸರಗೋಡಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದ್ದು , ಧಾವಿಸಿ ಬಂದ ಪರಿಸರವಾಸಿಗಳು ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ಚೆರ್ವತ್ತೂರಿನ ಆಸ್ಪತ್ರೆಗೆ ತಲಪಿಸಿದರು .
ಅಪಘಾತದ ಬಳಿಕ ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.