ಕಾಸರಗೋಡು : ಕೆಂಗಲ್ಲು ಸಾಗಾಟ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು, ಲಾರಿ ಚಾಲಕ ಸೇರಿದಂತೆ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಗುರುವಾರ ಸಂಜೆ ಮುಂಡಿತ್ತಡ್ಕ ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಸುಧೀರ್ ( ೩೦) ಮೃತಪಟ್ಟ ಕಾರ್ಮಿಕ. ಅರ್ಜುನ್ ಮತ್ತು ಅಜಯ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೋಳ್ಕನಡ್ಕ ಅಂಗನವಾಡಿ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ಧರೆಗೆ ಬಡಿದು ಉರುಳಿ ಬಿದ್ದಿದ್ದು , ಲಾರಿಯಡಿಯಲ್ಲಿ ಸಿಲುಕಿದ್ದ ಸುಧೀರ್ ರನ್ನು ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.