ಕಾಸರಗೋಡು : ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ಉಪ್ಪಳ ಸಮೀಪದ ಕುಕ್ಕಾರಿನಲ್ಲಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಲಾರಿ ಮೇಲೆ ಬಿದ್ದಿದ್ದು, ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು , ಕೆ ಎಸ್ ಇ ಬಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ವಿದ್ಯುತ್ ಸಂಪರ್ಕ ಚ್ಚೇಧಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಲಾರಿ ಚಾಲಕ ಹುಬ್ಬಳ್ಳಿಯ ಶಶಾಂತ್ ಹಾಗೂ ಕ್ಲೀನರ್ ಮಂಜುನಾಥ್ ಅಪಾಯ ದಿಂದ ಪಾರಾಗಿದ್ದಾರೆ.