ಮಂಜೇಶ್ವರ : ತಲಪಾಡಿ-ಚೆಂಗಳ ನಡುವಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ಜನರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಹಾಗೂ ಶಾಸಕ ಎ.ಕೆ.ಎಂ ಅಶ್ರಫ್ ನೇತೃತ್ವದಲ್ಲಿ ಗುರುವಾರ ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸಲಾಯಿತು.
ತಲಪಾಡಿಯಿಂದ ಮೊಗ್ರಾಲ್ ತನಕದ ಜನರಿಂದ ಅಹವಾಲು ಸ್ವೀಕರಿಸರಿಸಲಾಯಿತು. ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ, ಗುತ್ತಿಗೆ ದಾರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಷ್ಟ್ರೀಯ ಹೆದ್ದಾರಿ ಪರಿಸರದ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ ಉಪ್ಪಳ ಪೇಟೆ, ಕೈಕಂಬ, ನಯಾಬಜಾರ್, ಬಂದ್ಯೋಡು , ಶಿರಿಯ, ಆರಿಕ್ಕಾಡಿ, ಕುಂಬಳೆ, ಮೊಗ್ರಾಲ್ ಹಾಗೂ ಪ್ರಮುಖ ಪಟ್ಟಣಗಳಲ್ಲಿ ಮೇಲ್ಸೇತುವೆ ಸ್ಥಾಪಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.