ಬಂಟ್ವಾಳ: ಬಸ್ ಇಳಿದು ಮನೆಯ ಕಡೆಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಹೋಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.ಮಹಮ್ಮದ್ ಸಲೀಂ ಹಾಗೂ ಸಿಂಚನ ಗಾಯಗೊಂಡ ವಿದ್ಯಾರ್ಥಿಗಳು.
ಸಜೀಪ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಬಸ್ ನಿಂದ ಇಳಿದು ಮನೆಗೆ ತೆರಳುವ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಬಸ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಾಲಕನ ಅಜಾಗರೂಕತೆಯಿಂದ ಕಾರು ವಿದ್ಯಾರ್ಥಿಗಳ ಮೇಲೆ ಹರಿದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರ ವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಸಿಂಚನ ಎಂಬ ವಿದ್ಯಾರ್ಥಿ ನಿಗೂ ಗಾಯವಾಗಿದ್ದು ಅವಳು ಖಾಸಗಿ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರಪಾತಕ್ಕೆ ಉರುಳಿದ ಕಾರನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದೆ.ಕಾರು ಸಂಪೂರ್ಣ ಜಖಂ ಗೊಂಡಿದೆಯಾದರೂ ಕಾರಿನಲ್ಲಿ ದ್ದ ಚಾಲಕ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ.