ಕಾಸರಗೋಡು : ಮೀನುಗಾರಿಕೆ ಸಂದರ್ಭದಲ್ಲಿ ದೋಣಿ ನದಿಯಲ್ಲಿ ಮುಳುಗಿ ಮೀನುಗಾರ ಮೃತಪಟ್ಟ ಘಟನೆ ಉದುಮ ಸಮೀಪದ ಹೊಳೆಯಲ್ಲಿ ನಡೆದಿದೆ.
ಚೆಂಬರಿಕದ ಅಮು ( ೬೦) ಮೃತಪಟ್ಟವರು. ಇಂದು ಬೆಳಿಗ್ಗೆ ನದಿಯಲ್ಲಿ ಮೀನು ಹಿಡಿಯಲು ಬಲೆ ಬೀಸುತ್ತಿದ್ದಾಗ ದೋಣಿ ಮಗುಚಿ ಈ ದುರಂತ ನಡೆದಿದೆ. ಪರಿಸರ ವಾಸಿಗಳು ಕೂಡಲೇ ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ