ಕಾಸರಗೋಡು : ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಇಂದು ಬೆಳಿಗ್ಗೆ ಉಪ್ಪಳ ದಲ್ಲಿ ನಡೆದಿದೆ. ಉಪ್ಪಳ ಬಪ್ಪಾಯಿತೊಟ್ಟಿಯ ಮುಹಮ್ಮದ್ ಹಾರಿಸ್ (45) ಮೃತ ಪಟ್ಟ ವರು.
ಬಾವಿಗೆ ಬಿದ್ದಿದ್ದ ಕೊಡಪಾನ ವನ್ನು ತೆಗೆಯಲು ಮನೆಯ ಬಾವಿಗೆ ಇಳಿಯುತ್ತಿ ದ್ದಾಗ ಕಾಲು ಜಾರಿ ಬಾವಿಗೆ ಬಿದ್ದಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿ ಸಿದರೂ ಆಗಲೇ ಮೃತ ಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.