News Karnataka Kannada
Tuesday, April 30 2024
ಕಾಸರಗೋಡು

ಬಿಎಸ್ಪಿ ಅಭ್ಯರ್ಥಿಗೆ ಲಂಚ ನೀಡಿದ ಪ್ರಕರಣ ; ಬಿಜೆಪಿ ಕೇರಳ ರಾಜ್ಯಾಧ್ಯಕ್ಷರ ವಿಚಾರಣೆ

New Project 2021 09 16t203139.782
Photo Credit :

ಕಾಸರಗೋಡು : ನಾಮಪತ್ರ ಹಿಂಪಡೆಯಲು ಬಿಎಸ್ಪಿ ಅಭ್ಯರ್ಥಿಗೆ  ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ . ಸುರೇಂದ್ರನ್ ರನ್ನು  ಕ್ರೈಂ ಬ್ರಾಂಚ್ ಗುರುವಾರ ವಿಚಾರಣೆ ಗೊಳಪಡಿಸಿದೆ.

ಬೆಳಿಗ್ಗೆ ಕ್ರೈಂ ಬ್ರಾಂಚ್  ಅಧಿಕಾರಿಗಳ  ಮುಂದೆ ಹಾಜರಾದ  ಸುರೇಂದ್ರನ್ ರನ್ನು ಕಾಸರಗೋಡು ಅತಿಥಿ ಗ್ರಹದಲ್ಲಿ ಜಿಲ್ಲಾ ಕ್ರೈಂ ಬ್ರಾಂಚ್ ಅಧಿಕಾರಿಗಳು ವಿಚಾರಣೆ ನಡೆಸಿದರು.ಕಳೆದ ಏಪ್ರಿಲ್ ನಲ್ಲಿ ಕೇರಳ ವಿಧಾನಸಭಾ ಚುನಾವಣೆಗೆ ಮಂಜೇಶ್ವರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ . ಸುರೇಂದ್ರನ್ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ . ಸುಂದರರನ್ನು ಕಣದಿಂದ ಹಿಂದೆ ಸರಿಯಲು ಹಣ ಹಾಗೂ ಇನ್ನಿತರ ಆಮಿಷ ನೀಡಿದ್ದಾಗಿ ಬಹಿರಂಗಗೊಂಡಿತ್ತು .

ಬಿಜೆಪಿ ಮುಖಂಡರು ಸುಂದರರ ಮನೆಗೆ ತೆರಳಿ ಎರಡೂವರೆ ಲಕ್ಷ ರೂ . ನಗದು ,ಮೊಬೈಲ್ ಫೋನ್  ನೀಡಿದ್ದು , ಸುರೇಂದ್ರನ್ ಗೆದ್ದಲ್ಲಿ ಹೊಸ ಮನೆ , ಮಂಗಳೂರಿನಲ್ಲಿ ಬಾರ್ ಲೈಸನ್ಸ್ ನೀಡುವುದಾಗಿ ಆಮಿಷ ನೀಡಿದ್ದಾಗಿ ಚುನಾವಣೆ ಕಳೆದು ಒಂದು ತಿಂಗಳ ಬಳಿಕ ಕೆ . ಸುಂದರ ರವರೆ ಬಹಿರಂಗ ಪಡಿಸಿದ್ದರು.
ಈ ಹಿನ್ನಲೆಯಲ್ಲಿ ಬದಿಯಡ್ಕ ಠಾಣಾ ಪೊಲೀಸರು  ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಬದಿಯಡ್ಕ ಪೊಲೀಸರು ಆರಂಭದಲ್ಲಿ ತನಿಖೆ ನಡೆಸಿದ್ದು ,ಬಳಿಕ  ಕ್ರೈಂ ಬ್ರಾಂಚ್ ಪೊಲೀಸರಿಗೆ ಹಸ್ತಾಂ  ತರಿಸಲಾಗಿತ್ತು.

ಎಲ್ ಡಿ ಎಫ್ ಅಭ್ಯರ್ಥಿಯಾಗಿದ್ದ ವಿ.ವಿ ರಮೇಶನ್ ಸಲ್ಲಿಸಿದ್ದ ದೂರಿನಂತೆ ಕಾಸರಗೋಡು ನ್ಯಾಯಾಲಯದ ಆದೇಶದಂತೆ ಕೆ . ಸುರೇಂದ್ರನ್ ವಿರುದ್ಧ ಪ್ರಕರಣ ವನ್ನು ದಾಖಲಿಸಿದ್ದರು. ಪ್ರಕರಣದಲ್ಲಿ ಸುರೇಂದ್ರನ್ ಮಾತ್ರ ಆರೋಪಿ ಎಂದು ಗುರುತಿಸಲಾಗಿತ್ತು. ಇದರಂತೆ  ತನಿಖಾ ತಂಡ ಕೆ.ಸುಂದರ , ಅವರ ತಾಯಿ  ಬೇಡ್ಜಿ, ಬಿಜೆಪಿ ಮಂಜೇಶ್ವರ ವಿಧಾನಸಭಾ  ಕ್ಷೇತ್ರ ಸಮಿತಿ ಅಧ್ಯಕ್ಷ  ಮಣಿಕಂಠ ರೈ,ಯುವ ಮೋರ್ಚಾ ರಾಜ್ಯ ನಾಯಕ ಸುನಿಲ್ ನಾಯ್ಕ್, ವಿ.ಬಾಲಕೃಷ್ಣ ಶೆಟ್ಟಿ ಹಾಗೂ ಇನ್ನಿತರ ಜಿಲ್ಲಾ ನಾಯಕ ರಿಂದ ವಿವಿಧ ಹಂತಗಳಲ್ಲಿ ಮಾಹಿತಿ ಕಲೆ ಹಾಕಿತ್ತು . ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ಕೆ.ಸುರೇಂದ್ರನ್ ರನ್ನು ವಿಚಾರಣೆಗೆ  ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು