ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷ ರಾಗಿ ಕುಂಟಾರು ರವೀಶ ತಂತ್ರಿ ರವರನ್ನು ನೇಮಿಸಲಾಗಿದೆ. ಹಾಲಿ ಅಧ್ಯಕ್ಷ ಕೆ. ಶ್ರೀಕಾಂತ್ ರವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ರವೀಶ ತಂತ್ರಿ ಬಿಜೆಪಿ ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ವಿಧಾನ ಸಭಾ ಚುನಾವಣೆ ಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿ ರಾಜ್ಯ ಸಮಿತಿಯಲ್ಲಿ ಬದಲಾವಣೆ ತಂದಿದ್ದು, ಇದರಂತೆ ಕಾಸರಗೋಡು ಜಿಲ್ಲಾಧ್ಯಕ್ಷರ ನ್ನು ಬದಾಲಾಯಿಸಿದೆ.ಈ ಹಿಂದೆ ಮಂಜೇಶ್ವರ, ಕಾಸರಗೋಡು ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವೀಶ ತಂತ್ರಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ವಲಯಗಳಲ್ಲಿ ಸಕ್ರಿಯರಾಗಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ರಾಗಿ ಕುಂಟಾರು ರವೀಶ ತಂತ್ರಿ ನೇಮಕ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.