ಮಂಜೇಶ್ವರ : ಬೈಕ್ ಗಳ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ನಿವೃತ್ತ ಅಧ್ಯಾಪಕರೋರ್ವರು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ವರ್ಕಾಡಿ ಗುಡ್ಡೊಡಿಯ ನಾಗಪ್ಪ (68) ಮೃತ ಪಟ್ಟವರು. ಕೊಡ್ಲ ಮೊಗರು ವಾಣಿ ವಿಜಯ ಶಾಲೆಯಲ್ಲಿ ಅಧ್ಯಾಪಕ ರಾಗಿ ಸೇವೆ ಸಲ್ಲಿಸಿದ್ದರು. ಮಂಜೇಶ್ವರ ದ ಮೆಡಿಕಲ್ ಶಾಫ್ ಮಾಲಕರಾಗಿದ್ದರು. ಪ್ರಸ್ತುತ ಎಕ್ಕೂರಿನಲ್ಲಿ ವಾಸವಾಗಿದ್ದರು. ಫೆಬ್ರವರಿ 28 ರಂದು ತಲಪಾಡಿ ಟೋಲ್ ಗೇಟ್ ಬಳಿ ಬೈಕ್ ಗಳ ನಡುವೆ ಅಪಘಾತ ನಡೆದು ಗಂಭೀರ ಗಾಯಗೊಂಡಿದ್ದರು.