ಕಾಸರಗೋಡು : ಮಂಜೇಶ್ವರ ಕುಂಜತ್ತೂರಿನಲ್ಲಿ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 20 ಪವನ್ ಚಿನ್ನಾಭರಣ ಹಾಗೂ ಒಂದು ಸಾವಿರ ನಗದು ಕಳವುಗೈದ ಘಟನೆ ನಡೆದಿದೆ.
ಯತೀಮ್ ಖಾನ್ ರಸ್ತೆಯ ದಿವಂಗತ ಅಬ್ಬಾಸ್ ರವರ ಬಾಡಿಗೆ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಪತ್ನಿ ಮತ್ತು ಮಕ್ಕಳು ಗುರುವಾರ ರಾತ್ರಿ ಮನೆಗೆ ಬೀಗ ಹಾಕಿ ಸಂಬಂಧಿಕರ ವಿವಾಹಕ್ಕೆ ತೆರಳಿದ್ದರು ತಡರಾತ್ರಿ ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಮನೆಯ ಮೊದಲ ಅಂತಸ್ತಿನ ಬಾಗಿಲು ಮುರಿದು ಕಳ್ಳರು ಒಳನಿಗ್ಗಿದ್ದು , ಕಪಾಟಿನಲ್ಲಿರಿಸಲಾಗಿದ್ದ ಚಿನ್ನಾಭರಣ ಮತ್ತು ನಗದು ಕಳವು ಮಾಡಲಾಗಿದೆ. ಕಳ್ಳರು ಮನೆಯೊಳಗಡೆ ಮೆಣಸಿನ ಹುಡಿ ಎರಚಿದ್ದು , ಮೆಣಸಿನ ಹುಡಿಯ ಒಂದು ಕವರ್ ಮನೆ ಪರಿಸರದಲ್ಲಿ ಪತ್ತೆಯಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…
ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ.
ಕೆಎಸ್ಆರ್ಟಿಸಿ ಬಸ್ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.
ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…