ಕಾಸರಗೋಡು: ಶ್ವಾಶನಾಳ ದಲ್ಲಿ ಜೀರುಂಡೆ ಸಿಲುಕಿ ಒಂದು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ನಗರ ಹೊರವಲಯದ ನುಳ್ಳಿಪ್ಪಾಡಿ ಚೆನ್ನಿಕೆರೆಯ ಸತ್ಯೇ೦ದ್ರ- ರಂಜಿನಿ ದಂಪತಿ ಪುತ್ರ ಅನ್ವೇದ್ ಮೃತಪಟ್ಟ ಮಗು .
ಶನಿವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದು ಕೂಡಲೇ ಮನೆಯವರು ಆಸ್ಪತ್ರೆಗೆ ತಲಪಿಸಿದರೂ ಮಗು ಮೃತಪಟ್ಟಿತ್ತು .
ತಪಾಸಣೆಯಿಂದ ಮಗುವಿನ ಸಾವಿಗೆ ಕಾರಣ ತಿಳಿದುಬಂದಿರಲಿಲ್ಲ . ಇದರಿಂದ ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಶ್ವಾಸನಾಳದಲ್ಲಿ ಸಣ್ಣ ಜೀರುಂಡೆ ಮರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ಜೀರುಂಡೆ ಮರಿಯನ್ನು ನುಂಗಿರಬಹುದು ಎಂದು ಶಂಕಿಸಲಾಗಿದೆ .
ಇದರಿಂದ ಉಸಿರು ಗಟ್ಟಿ ಮೃತಪಟ್ಟಿರಬಹುದು ಎನ್ನಲಾಗಿದೆ , ಮಗು ಒಮ್ಮೆಲೇ ಕುಸಿದು ಬಿದ್ದುದ್ದನ್ನು ಗಾಬರಿಗೊಂಡ ಮನೆಯವರು ಬೊಬ್ಬೆ ಹಾಕಿದಾಗ ಪರಿಸರವಾಸಿಗಳು ಧಾವಿಸಿ ಬಂದು ಸ್ಥಳೀಯ ಆಸ್ಪತ್ರೆಗೆ ತಲಪಿಸಿದರು .ಆಗಲೇ ಮಗು ಮೃತಪಟ್ಟಿತ್ತು. ಬಳಿಕ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಎರಡೂವರೆ ವರ್ಷದ ಋದ್ವೇಗ್ ಸಹೋದರ ನಿದ್ದಾನೆ. ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದರು.