ATM ವಾಹನದ ಗಾಜನ್ನು ಒಡೆದು ೫೦ ಲಕ್ಷ ರೂ. ದರೋಡೆ

ಕಾಸರಗೋಡು : ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ ೫೦ ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ.

ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದು, ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎಟಿಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ . ಪರಿಶೀಲಿಸಿದಾಗ ಸುಮಾರು ೫೦ ಲಕ್ಷ ರೂ. ಗಳಿದ್ದ ಬಾಕ್ಸ್ ನಾಪತ್ತೆಯಾಗಿತ್ತು.

ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತಿತ್ತು, ವಾಹನದ ಹಿಂಬದಿಯ ಲಾಕರ್ ನಲ್ಲಿ ಇಡಲಾಗಿದ್ದ ಹಣವನ್ನು ಉಪ್ಪಳದ ಎಟಿಎಂ ನಲ್ಲಿ ತುಂಬಿಸಲು ಮಧ್ಯಭಾಗದ ಸೀಟಿನಲ್ಲಿ ಇತ್ತು ಗಾಜು ಲಾಕ್ ಹಾಕಿ ಎಟಿಎಂ ಕೌಂಟರ್ ಗೆ ನೌಕರರು ತೆರಳಿದ್ದರು. ಈ ಸಂದರ್ಭದಲ್ಲಿ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿ ಸಿ ಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ.

Chaitra Kulal

Recent Posts

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

15 mins ago

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

42 mins ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

58 mins ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

1 hour ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

2 hours ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

2 hours ago