ತಿರುವನಂತಪುರಂ: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಕೇರಳ ಅಬಕಾರಿ ಅಧಿಕಾರಿಗಳು 6,000 ಡಿಟೋನೇಟರ್ಗಳು ಮತ್ತು 2,800 ಜಿಲೆಟಿನ್ ಕಡ್ಡಿಗಳು ಸೇರಿದಂತೆ ಭಾರಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬುವವರ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವರನ್ನು ಅವರ ಮನೆಗೆ ಕರೆದೊಯ್ದು ಉಳಿದ ವಸ್ತುಗಳನ್ನು ವಶಪಡಿಸಿಕೊಂಡರು.
ಮನೆಯಲ್ಲಿದ್ದ ಮುಸ್ತಫಾ ವಾಶ್ರೂಮ್ಗೆ ಹೋಗಿದ್ದು, ಹೊರಗೆ ಬರಲು ನಿರಾಕರಿಸಿದರು. ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಮಣಿಕಟ್ಟನ್ನು ಕಡಿದುಕೊಂಡಿರುವುದು ಪತ್ತೆಯಾಗಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮುಸ್ತಫಾ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಕರ್ನಾಟಕದ ಕ್ವಾರಿ ಮಾಲೀಕರಿಗೆ ಸರಬರಾಜು ಮಾಡಲು ಈ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ.