ಕಾಸರಗೋಡು: ನಗರದ ವ್ಯಾಪಾರಿಯೋರ್ವರ ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದು, ಅವರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿ ನನ್ನ ಜೀವನ ಅಂತ್ಯಗೊಳಿಸುವುದಾಗಿ ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ ಶುಕ್ರವಾರ ಮುಂಜಾನೆ ಸಂದೇಶ ಕಳುಹಿಸಿದ್ದು, ನಂತರ ಕಾರಿನಲ್ಲಿ ಬಂದು ಚಂದ್ರಗಿರಿ ಸೇತುವೆಯಲ್ಲಿ ನಿಲ್ಲಿಸಿ ನಂತರ ನದಿಗೆ ಹಾರಿದ್ದಾರೆ.
ನದಿಗೆ ಹಾರುತ್ತಿರುವುದನ್ನು ಗಮನಿಸಿದ ಪ್ರತ್ಯಕ್ಷದರ್ಶಿರೋರ್ವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. ಚಪ್ಪಲಿ ಸೇತುವೆಯಲ್ಲಿ ಪತ್ತೆಯಾಗಿತ್ತು. ಬಳಿಕ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು , ನಾಗರಿಕರು ಶೋಧ ನಡೆಸಿದ್ದರು. ಘಟನೆ ನಡೆದ ಒಂದು ಕಿ.ಮೀ ದೂರದ ನದಿ ತೀರದಲ್ಲಿ ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಆರ್ಥಿಕ ಮುಗ್ಗಟ್ಟು ಕೃತ್ಯಕ್ಕೆ ಕಾರಣ ಎನ್ನಲಾಗಿದೆ.