ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಆದಿತ್ಯವಾರ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾಡತ್ತಡ್ಕದಲ್ಲಿ ನಡೆದಿದೆ.
ಮಾಡತ್ತಡ್ಕದ ರಶ್ಮಿತಾ (14) ಮೃತ ಪಟ್ಟವರು. ಬದಿಯಡ್ಕ ನವ ಜೀವನ ಹಯರ್ ಸೆಕೆಂಡರಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿಯಾಗಿದ್ದಳು. ಆದಿತ್ಯವಾರ ಮನೆಯಿಂದ ಹೊರಗಡೆ ತೆರಳಿದ್ದ ರಷ್ಮಿತಾ ನಾಪತ್ತೆಯಾಗಿದ್ದು,ಮನೆಯವರು ಹುಡುಕಾಟ ನಡೆಸಿದಾಗ ಮನೆಯಿಂದ ಅಲ್ಪ ದೂರದ ಮರವೊಂದರ ರೆಂಬೆಯಲ್ಲಿ ನೇಣು ಬಿಗಿದು ಮೃತ ಪಟ್ಟಿರುವುದು ಪತ್ತೆಯಾಗಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.