News Karnataka Kannada
Saturday, April 27 2024
ಕಾಸರಗೋಡು

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಸಾವು

ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ ಎನ್ನಬಹುದು.
Photo Credit : By Author

ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕನೋರ್ವ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ ಎನ್ನಬಹುದು.

ಚೇವಾರ್ ಕುಂಟಗೇರಡ್ಕದ ಅಬ್ದುಲ್ ರಹಮಾನ್ (42) ಮೃತ ಪಟ್ಟವರು. ಧರ್ಮತ್ತಡ್ಕ – ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಘಟನೆ ನಡೆದಿದೆ. ಪೆರ್ಮುದೆ ಜಂಕ್ಷನ್ ಗೆ ಬಸ್ಸು ತಲಪಿದಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಸ್ಸಿನಿಂದ ಇಳಿದು ಸಮೀಪದ ಅಂಗಡಿಯಿಂದ ನೀರು ಕುಡಿದಿದ್ದರು. ಬಳಿಕ ಬಸ್ಸು ಚಲಾಯಿಸಿಕೊಂಡು ಬಂದಿದ್ದಾರೆ.

ಸುಮಾರು ಮೂರು ಕಿಲೋ ಮೀಟರ್ ತನಕ ಬಸ್ಸು ಚಲಾಯಿಸಿಕೊಂಡು ಬಂದಿದ್ದು, ಚೇವಾರ್ ಕುಂಟಗೇರಡ್ಕ ಸ್ಟಾಪ್ ತಲುಪಿದಾಗ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ಬಸ್ಸು ಕೆಲ ನಿಮಿಷವಾದರೂ ಮುಂದಕ್ಕೆ ಸಾಗದಿದ್ದುದರಿಂದ ಗಮನಿಸಿದಾಗ ಸ್ಟಿಯರಿಂಗ್ ಮೇಲೆ ತಲೆ ಇಟ್ಟು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆದರೆ ಚಾಲಕ ಬಸ್ಸು ನಿಲ್ಲಿಸಿದರಿಂದ ಭಾರೀ ದುರಂತ ತಪ್ಪಿದೆ ಎನ್ನಬಹುದು.

ಬಸ್ಸು ಸ್ಟಾರ್ಟ್ ನಲ್ಲಿತ್ತು. ಪ್ರಯಾಣಿಕರು ಹಾಗೂ ನಾಗರಿಕರು ಕೂಡಲೇ ಬಂದ್ಯೋಡಿನ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು. ಘಟನೆ ನಡೆದಾಗ ಬಸ್ಸಿನಲ್ಲಿ ಮಹಿಳೆಯರು , ಮಕ್ಕಳು ಸೇರಿದಂತೆ 30 ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅಬ್ದುಲ್ ರಹಮಾನ್ ಕಳೆದ ಕೆಲ ವರ್ಷಗಳಿಂದ ಬಸ್ಸು ಚಾಲಕರಾಗಿ ದುಡಿಯುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು