ಕಾಸರಗೋಡು: ಅಂತರಾಜ್ಯ ಕಳ್ಳನೋರ್ವನನ್ನು ಡಿವೈಎಸ್ಪಿ ಪಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ತೃಶ್ಯೂರು ಅಂಬಲ್ಲೂರಿನ ಶಿಬು ಪಿ.ಆರ್ (52) ಬಂಧಿತ ಆರೋಪಿ. ಈತ ಕೇರಳ ಹಾಗೂ ಕರ್ನಾಟಕದಲ್ಲಿ ಹಲವಾರು ಕಳವು ಪ್ರಕರಣಗಳ ಆರೋಪಿಯಾಗಿದ್ದಾನೆ.
ಕರ್ನಾಟಕದಲ್ಲಿ ಕಳವು ಪ್ರಕರಣಗಳ ಆರೋಪಿಯಾಗಿರುವ ಈತ ಜೈಲು ವಾಸ ಅನುಭವಿಸಿ ಕಳೆದ ನವಂಬರ್ 16 ರಂದು ಬಿಡುಗಡೆ ಗೊಂಡಿದ್ದನು. ಜನವರಿ ರಂದು ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ನಡೆಸುತ್ತಿದ್ದಾಗ ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದನು. ಜೊತೆಗಿದ್ದ ಶಿಬಿಲಿಯನ್ನು ಪೊಲೀಸರು ಬಂಧಿಸಿದ್ದರು. ಪರಾರಿಯಾಗಿದ್ದ ಶಿಬುನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಪಯಂಗಡಿ, ತಲಶ್ಯೇರಿ, ಮಾಹೆ, ಕರ್ನಾಟಕದ ಸುಳ್ಯ, ಉಡುಪಿ ಅಲ್ಲದೆ ಹೊಸದುರ್ಗ, ಬೇಕಲ, ಚಂದೇರ, ಕಣ್ಣೂರು, ವಳಪಟ್ಟಣ, ತಳಿಪರಂಬ, ಮಟ್ಟನ್ನೂರು, ಬಾಲಷ್ಯೇರಿ, ಪಾಲಕ್ಕಾಡ್, ಕೋಜಿಕ್ಕೋಡ್ ಮೊದಲಾದ ಕಡೆಗಳಲ್ಲಿ ಈತನ ಮೇಲೆ ಪ್ರಕರಣಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…