ಕಾಸರಗೋಡು: ಮನೆಯ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಸುಮಾರು 25 ಪವನ್ ಚಿನ್ನಾಭರಣ ಕಳವುಗೈದ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರಿನಲ್ಲಿ ನಡೆದಿದೆ.
ಮಂಜೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶೋಭಾ ಶೆಟ್ಟಿ ರವರ ಕುಂಜತ್ತೂರುನಲ್ಲಿರುವ ಮನೆಗೆ ನುಗ್ಗಿ ಈಕೃತ್ಯ ನಡೆಸಲಾಗಿದೆ .
ಮನೆಯವರು ಶುಕ್ರವಾರ ರಾತ್ರಿ ಮನೆ ಸಮೀಪದ ದೇವಸ್ಥಾನ ವೊಂದರ ಉತ್ಸವಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮುಂಭಾಗಿಲು ತೆರೆದು ಒಳ ನುಗ್ಗಿದ ಕಳ್ಳರು ಕಪಾಟಿ ನಲ್ಲಿ ರಿಸಲಾಗಿದ್ದ ಚಿನ್ನಾಭರಣ ದೋಚಿದ್ದಾರೆ. ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.
ಬೆರಳಚ್ಚು ತಜ್ಞರು, ಶ್ವಾನ ದಳ ಸ್ಥಳಕ್ಕೆ ತಲಪಿ ಮಾಹಿತಿ ಕಲೆ ಹಾಕಿದ್ದಾರೆ.