News Karnataka Kannada
Monday, April 29 2024
ಕಾಸರಗೋಡು

ಕಾಸರಗೋಡು: ಬಸ್ಸು ಅಪಘಾತದಲ್ಲಿ 9 ಮಂದಿ ಸಾವು

Kasargod: 9 killed in bus accident
Photo Credit : By Author

ಕಾಸರಗೋಡು: ತೃಶ್ಯೂರು ವಡಕ್ಕಂಚೇರಿಯಲ್ಲಿ ಬಸ್ಸು ಅಪಘಾತದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡು ಮೂಲದ ವಿದ್ಯಾರ್ಥಿನಿ ಒಳಗೊಂಡಿದ್ದಾರೆ. ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಈ ಪೈಕಿ ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ.

ಈ ಪೈಕಿ ಕಾಸರಗೊಂಡು ಬಳ೦ತ್ತೋಡಿನ ಜೋಸೆಫ್ – ಶೈನಿ ದಂಪತಿ ಪುತ್ರಿ ಎಲ್ನಾ ಜೋಸ್ ( 15) ಮೃತಪಟ್ಟಿದ್ದಾರೆ. ಇವರ ಕುಟುಂಬ ಪ್ರಸ್ತುತ ಎರ್ನಾಕುಳಂ ನಲ್ಲಿ ವಾಸಿಸುತ್ತಿದ್ದಾರೆ.

ಬುಧವಾರ ತಡರಾತ್ರಿ ಅಪಘಾತ ನಡೆದಿತ್ತು. ಎರ್ನಾಕುಲಂ ಮುಳುಂ ಮುಳುಂಪುರತ್ ವೆಟ್ಟಿಕಲ್ ಮಾರ್ ಬಸೆಲಿಯಾಸ್ ವಿದ್ಯಾರ್ಥಿಗಳು ಊಟಿಗೆ ಪ್ರವಾಸಕ್ಕೆ ಬಸ್ಸು ವಡಕ್ಕಂಚೇರಿಯಲ್ಲಿ ಕೆ.ಎಸ್ ಆರ್.ಟಿ.ಸಿ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟು, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು