News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಆಟೋರಿಕ್ಷಾ ಮತ್ತು  ಸ್ಕೂಟರ್ ನಡುವೆ ಅಪಘಾತ, ಯುವಕನೋರ್ವ ಮೃತ

Kasargod: A youth was killed in an accident between an autorickshaw and a scooter in Kasargod.
Photo Credit :

ಕಾಸರಗೋಡು : ಆಟೋರಿಕ್ಷಾ ಮತ್ತು  ಸ್ಕೂಟರ್ ನಡುವೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರವಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು  ಪಂಜಿಗುಡ್ಡೆಯಲ್ಲಿ ನಡೆದಿದೆ.

ಮುಟ್ಟತ್ತೋಡಿ  ಕೋಪೆ  ಹಿದಾಯತ್ ನಗರದ  ಮುಹಮ್ಮದ್  ಅಶ್ರಫ್ ( ೨೭) ಮೃತಪಟ್ಟವರು.

ಜುಲೈ ೧೭  ರಂದು ಇವರ ವಿವಾಹ ನಿಗಧಿಯಾಗಿತ್ತು . ಶನಿವಾರವಷ್ಟೇ ಗಲ್ಫ್ ನಿಂದ ಊರಿಗೆ ಬಂದಿದ್ದರು. ಸಹಸವಾರ  ಅಶ್ರಫ್ ನ ಸಹೋದರ ಇರ್ಫಾನ್ ಗಾಯಗೊಂಡಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ.

ಈದುಲ್ ಫಿತ್ರ್ ಹಬ್ಬದಂಗವಾಗಿ ಸಂಜೆ   ಪಂಜಿಗುಡ್ಡೆ ಯಲ್ಲಿರುವ ಚಿಕ್ಕಮ್ಮನ ಮನೆಗೆ  ತೆರಳಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ತಲಪಿಸಿದರೂ ಅಶ್ರಫ್ ಮೃತಪಟ್ಟರು . ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು