News Karnataka Kannada
Friday, May 03 2024
ಕಾಸರಗೋಡು

ಕಾಸರಗೋಡು: ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ

Accused arrested for escaping from police custody
Photo Credit :
ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದ ಸಂದರ್ಭದಲ್ಲಿ  ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಣಂಗೂರಿನ ಅಹಮ್ಮದ್ ಕಬೀರ್ ( ೨೬) ಪರಾರಿಯಾಗಿದ್ದ ಆರೋಪಿ.
ಶುಕ್ರವಾರ ಸಂಜೆ  ಎಡನೀರಿನಿಂದ ಈತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಎಡನೀರಿನ ಕ್ವಾಟರ್ಸ್ ವೊಂದರ  ಹಿಂಬದಿಯ  ನಿರ್ಜನ ಪ್ರದೇಶದಲ್ಲಿ ಅವಿತಿದ್ದ ಈತ ನನ್ನು  ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡರು.
ಜುಲೈ ೧೩ ರಂದು  ಮಧ್ಯಾಹ್ನ  ನ್ಯಾಯಾಲಯಕ್ಕೆ ಹಾಜರು ಪಡಿಸಿ ಸಮೀಪದ  ಕ್ಯಾಂಟಿನ್ ಗೆ ತೆರಳಿದ್ದ ಸಂದರ್ಭದಲ್ಲಿ ಈತ ಪರಾರಿಯಾಗಿದ್ದನು.
ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ಈತ  ಕಣ್ಣೂರು ಸೆಂಟ್ರಲ್  ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದನು.  ಆರೋಪಿ  ಪರಾರಿಯಾಗಲು ನೇರವಾದ ಆಲಂಪಾಡಿಯ ಜಾವೇದ್ ನನ್ನು ಪೊಲೀಸರು ಬಂಧಿಸಿದ್ದರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು