ಕಾಸರಗೋಡು : ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕುಂಬಳೆ ಸಮೀಪದ ಅನಂತಪುರ ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ದ ಮೊಸಳೆ ʼಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.
ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.
ಈ ದೇವಾಲದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯಲ್ಲಿ ಈ ಮೊಸಳೆಯೂ ಕೂಡ ಇಲ್ಲೇ ವಾಸವಾಗಿರುತ್ತದೆ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು.
ಕ್ಷೇತ್ರದಲ್ಲೊಂದು ನಿರುಪದ್ರವಿ ಮೊಸಳೆ ಇರುವುದರಿಂದಲೇ ಅನಂತಪುರ ಕ್ಷೇತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಕುತೂಹಲ ಮೂಡಿಸಿ ಜನಪ್ರಿಯತೆ ಪಡೆದಿತ್ತು. ಸ್ವಾತಂತ್ರ್ಯ ಪೂರ್ವದಲ್ಲೇ ಕ್ಷೇತ್ರದಲ್ಲಿ ಮೊಸಳೆ ಇತ್ತು. ಅದನ್ನ ಈ ಪ್ರದೇಶದಲ್ಲಿ ಮಿಲಿಟರಿ ಕ್ಯಾಂಪ್ ಹಾಕಿದ್ದ ಬ್ರಿಟೀಷರು ಗುಂಡಿಕ್ಕಿ ಕೊಂದಿದ್ದರಂತೆ. ತದನಂತರ ಮತ್ತೊಂದು ಮೊಸಳೆ ಮರಿ ತಾನಾಗಿಯೇ ಕೆರೆಯಲ್ಲಿ ಪ್ರತ್ಯಕ್ಷಗೊಂಡಿತ್ತು. ಅದಕ್ಕೆ ಬಬಿಯಾ ಎಂದು ಹೆಸರಿಸಲಾಗಿತ್ತು.
ಈ ವರೆಗೆ ಯಾರೊಬ್ಬರಿಗೂ ಉಪಟಳ ಮಾಡದ ದೇವರ ಮೊಸಳೆ ಎಂದೇ ಜನಾನುರಾಗಿಯಾಗಿದ್ದ ಈ ಮೊಸಳೆಯು ಇತ್ತೀಚಿನ ದಿನದಲ್ಲಿ ವಯೋಸಹಜ ಅನಾರೋಗ್ಯ ಕ್ಕೆ ತುತ್ತಾಗಿತ್ತು. ಅದಕ್ಕೆ ಚಿಕಿತ್ಸೆ ಯೂ ನಡೆಯುತಿತ್ತು. ಈ ತನ್ಮಧ್ಯೆ ನಿನ್ನೆ ರಾತ್ರಿ ಅದು ನೀರಲ್ಲಿ ತೇಲಿತು.
ಪರಿಸರದ ಭಕ್ತರು ಸೇರಿ ಮೊಸಳೆಯನ್ನು ನೀರಿಂದ ಮೇಲೆತ್ತಿ ಕ್ಷೇತ್ರ ಮುಂಭಾಗ ದಲ್ಲಿ ಅಂತಿಮ ದರ್ಶನಕ್ಕಿಲ್ರಿಸಲಾಗಿದೆ . ಬಳಿಕ ಅ ತಂತ್ರಿಗಳ ಆಗಮನದ ಬಳಿಕ ಅದರ ಅಂತ್ಯವಿಧಿ ಕ್ರಿಯೆಗಳು ನಡೆಯಲಿದೆ.