ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿ, ಪೆರುಂಬಳ ಬೇನೂರು ತಲಕ್ಲಾಯಿಯ ವಿದ್ಯಾರ್ಥಿನಿ ಅಂಜುಶ್ರೀ ಪಾರ್ವತಿಯ ಸಾವಿನ ಘಟನೆಯೂ ಇದೀಗ ಸಂಶಯಕ್ಕೆ ಎಡೆಮಾಡಿಕೊಟ್ಟಿದ್ದು, ಆತ್ಮಹತ್ಯೆ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದ್ದು, ಅಂಜುಶ್ರೀಯವಳದೆನ್ನಲಾದ ಪತ್ರ ಹಾಗೂ ಮೊಬೈಲ್ ಫೋನ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಹಿಂದೆ ವಿಷಾಹಾರ ಸೇವನೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಸಂಶಯ ಉಂಟಾಗಿದ್ದು, ಆದರೆ ಮರಣೋತ್ತರ ಪರೀಕ್ಷಾ ಪ್ರಾಥಮಿಕ ವರದಿಯಲ್ಲಿ ಸಾವಿಗೆ ವಿಷಾಹಾರ ಸೇವನೆ ಕಾರಣ ಅಲ್ಲ ಎಂಬ ಉಲ್ಲೇಖ ಮಾಡಿದ್ದು, ಇದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ ವಿಷ ಸೇವನೆ ಮಾಡಿರುವುದು ಸಾವಿಗೆ ಕಾರಣ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ಸುಳಿವು ನೀಡಿದ್ದರು. ಕರುಳಿನ ನಿಷ್ಕ್ರಿಯತೆ ಹಾಗೂ ಜಾಂಡಿಸ್ ನಿಂದ ಬಳಲು ತ್ತಿದ್ದುದಾಗಿ ವರದಿಯಲ್ಲಿ ಉಲ್ಲೇಖಿಸಿದ್ದು, ಹೆಚ್ಚಿನ ಆಂತರಿಕ ಅವಯವಗಳನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.
ಈ ವರದಿ ಲಭಿಸಿದ ಬಳಿಕ ಸ್ಪಷ್ಟ ಮಾಹಿತಿ ಲಭಿಸಲಿದೆ. ಅಂಜುಶ್ರೀಯ ದೇಹದಲ್ಲಿ ವಿಷಾಂಶ ಪತ್ತೆಯಾಗಿದ್ದು ಆದರೆ ಆಹಾರದಿಂದ ವಿಷದ ಅಂಶ ಅಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿದ್ದು, ಇದರಿಂದ ಸಂಶಯ ಉಂಟಾಗಿದ್ದು, ಈ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಡಿ. ೩೧ ರಂದು ನಗರ ಹೊರವಲಯದ ಹೋಟೆಲೊಂದರಿಂದ ‘ಕುಝಿಮಂದಿ’ ಮಾಂಸಾಹಾರ ಆರ್ಡರ್ ಮೂಲಕ ಮನೆಗೆ ತರಿಸಿದ್ದ ಅಂಜು ಶ್ರೀ ರಾತ್ರಿ ಸೇವಿಸಿದ ಬಳಿಕ ಅಸ್ವಸ್ಥ ಗೊಂಡಿದ್ದರು. ಬಳಿಕ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಐದು ದಿನಗಳ ಬಳಿಕ ಸ್ಥಿತಿ ಗಂಭೀರವಾದುದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜನವರಿ ೭ ರಂದು ಮೃತಪಟ್ಟಿದ್ದರ. ಆಹಾರ ಖರೀದಿಸಿದ್ದ ಹೋಟೆಲ್ ನ ಪರವಾನಿಗೆಯನ್ನು ಆಹಾರ ಸುರಕ್ಷಾ ಇಲಾಖೆಅಧಿಕಾರಿಗಳು ರದ್ದುಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಮನೆಯಿಂದ ಲಭಿಸಿದ ಪತ್ರದಲ್ಲಿ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾಳೆನ್ನಲಾಗಿದೆ. ಆದರೆ ತನಿಖೆಯ ದ್ರಷ್ಟಿಯಿಂದ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಸ್ಪಷ್ಟಪಡಿಸಿಲ್ಲ.