News Karnataka Kannada
Thursday, May 02 2024
ಕಾಸರಗೋಡು

ಕಾಸರಗೋಡು : ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮದಲ್ಲಿ ಚಪ್ಪರ ಕುಸಿದು 59 ಮಂದಿಗೆ ಗಾಯ

Kasar
Photo Credit : By Author

ಕಾಸರಗೋಡು : ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ವಿದ್ಯಾರ್ಥಿಗಳು ಸೇರಿದಂತೆ 59 ಮಂದಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಸರಕಾರಿ ಹಯರ್ ಸೆಕಂಡರಿ ಶಾಲೆಯಲ್ಲಿ ನಡೆದಿದೆ.

ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡವರಲ್ಲಿ 50 ಮಂದಿ ವಿದ್ಯಾರ್ಥಿಗಳು ಒಳಗೊಂಡಿದ್ದಾರೆ. ಈ ಪೈಕಿ 14 ಮಂದಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ, ಕಾಸರಗೋಡು ಜನರಲ್ ಆಸ್ಪತ್ರೆ ಮೊದಲಾದೆಡೆ ಚಿಕಿತ್ಸೆ ಪಡೆದಿದ್ದಾರೆ.

ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಶುಕ್ರವಾರ ಈ ಅವಘಡ ನಡೆದಿದೆ.

ತಗಡು ಶೀಟ್ ನ ಚಪ್ಪರ ದಿಡಿರನೆ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಚಪ್ಪರ ದಡಿಯಲ್ಲಿದ್ದರು ಎನ್ನಲಾಗಿದೆ. ಕುಸಿದು ಬಿದ್ದಿದ್ದ ಚಪ್ಪರದ ಅವಶೇಷ ಗಳಡಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರ ತೆಗೆದು ಆಸ್ಪತ್ರೆಗೆ ತಲಪಿಸಿದರು. ದುರಂತ ದಲ್ಲಿ ಕೆಲ ಶಿಕ್ಷಕರು ಮತ್ತು ತೀರ್ಫುಗಾರರಿಗೂ ಗಾಯಗಳಾಗಿವೆ.

ಉಪಜಿಲ್ಲೆಯ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ವಿಜ್ಞಾನ ಮೇಳಕ್ಕೆ ಆಗಮಿಸಿದ್ದರು. ಘಟನೆ ನಡೆಯುವ ಸಂದರ್ಭದಲ್ಲಿ ಬಹುತೇಕ ವಿದ್ಯಾರ್ಥಿಗಳು ಊಟಕ್ಕೆ ತೆರಳಿದ್ದರಿಂದ ಭಾರೀ ದುರಂತ ತಪ್ಪಿದೆ ಎನ್ನಲಾಗಿದೆ. ಚಪ್ಪರ ಅಳವಡಿಕೆಯಲ್ಲಿನ ಅವೈಜ್ಞಾನಿಕ ತೆ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ತನಿಖೆಗೆ ಆದೇಶ:
ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಶಿಕ್ಷಣ ಇಲಾಖಾ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ. ತನಿಖೆಯ ಹೊಣೆಗಾರಿಕೆಯನ್ನು ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿ ರವರಿಗೆ ವಹಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಧಿಕಾರಿ ಭಂಡಾರಿ ಸ್ವಾಗತ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ .ವೈಭವ್ ಸಕ್ಸೆನಾ , ಶಿಕ್ಷಣಾಧಿಕಾರಿ ನಂದಿಕೇಶನ್ , ದಿನೇಶ್ , ಜಿಲ್ಲಾ ವೈದ್ಯಾಧಿಕಾರಿ ಡಾ. ರಾಮ್ ದಾಸ್ , ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು .

ನಾಲ್ವರು ಪೊಲೀಸ್ ವಶಕ್ಕೆ
ಘಟನಗೆ ಕಾರಣವಾದ ಚಪ್ಪರದ ಗುತ್ತಿಗೆದಾರ ಹಾಗೂ ಕಾರ್ಮಿಕರು ಸೇರಿದಂತೆ ನಾಲ್ವರನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರ ಆದೇಶದಂತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು