News Karnataka Kannada
Monday, April 29 2024
ಕಾಸರಗೋಡು

ಕಾಸರಗೋಡು: ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ

Kasargod: Body of a youth found lying submerged in water
Photo Credit : By Author

ಕಾಸರಗೋಡು: ಪಡನ್ನಕ್ಕಾಡ್ ಸಮೀಪ ಹೊಳೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ಪಶ್ಚಿಮ ಬಂಗಾಳ ಮೂಲದ ಯುವಕನ ಮೃತದೇಹ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ.

ಪಶ್ಚಿಮ ಬಂಗಾಳದ ರಾಜ್ ರಾಯ್ (23) ಮೃತಪಟ್ಟವನು. ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ಸ್ನೇಹಿತರ ಜೊತೆ ಪಡನ್ನಕಾಡ್ ನಂಬ್ಯಾರ್ ಕಾಲ್ ಹೊಳೆಯ ಆಣೆಕಟ್ಟು ಬಳಿ ಸ್ನಾನಕ್ಕಿಳಿದಿದ್ದು, ಈ ಸಂದರ್ಭದಲ್ಲಿ ನೀರುಪಾಲಾಗಿದ್ದನು.

ಅಗ್ನಿಶಾಮಕ ದಳದ ಸಿಬಂದಿಗಳು, ನಾಗರಿಕರು, ಪೊಲೀಸರು ಶೋಧ ನಡೆಸಿದ್ದು, ಘಟನೆ ನಡೆದ ಸ್ಥಳದಿಂದ ಕೆಲವೇ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ದಿನಗಳ ಹಿಂದೆಯಷ್ಟೇ ರಾಜ್ ರಾಯ್ ಕಾಸರಗೋಡಿಗೆ ಆಗಮಿಸಿದ್ದರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು