ಕಾಸರಗೋಡು: ಪಡನ್ನಕ್ಕಾಡ್ ಸಮೀಪ ಹೊಳೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ಪಶ್ಚಿಮ ಬಂಗಾಳ ಮೂಲದ ಯುವಕನ ಮೃತದೇಹ ಶನಿವಾರ ಮಧ್ಯಾಹ್ನ ಪತ್ತೆಯಾಗಿದೆ.
ಪಶ್ಚಿಮ ಬಂಗಾಳದ ರಾಜ್ ರಾಯ್ (23) ಮೃತಪಟ್ಟವನು. ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ಸ್ನೇಹಿತರ ಜೊತೆ ಪಡನ್ನಕಾಡ್ ನಂಬ್ಯಾರ್ ಕಾಲ್ ಹೊಳೆಯ ಆಣೆಕಟ್ಟು ಬಳಿ ಸ್ನಾನಕ್ಕಿಳಿದಿದ್ದು, ಈ ಸಂದರ್ಭದಲ್ಲಿ ನೀರುಪಾಲಾಗಿದ್ದನು.
ಅಗ್ನಿಶಾಮಕ ದಳದ ಸಿಬಂದಿಗಳು, ನಾಗರಿಕರು, ಪೊಲೀಸರು ಶೋಧ ನಡೆಸಿದ್ದು, ಘಟನೆ ನಡೆದ ಸ್ಥಳದಿಂದ ಕೆಲವೇ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ದಿನಗಳ ಹಿಂದೆಯಷ್ಟೇ ರಾಜ್ ರಾಯ್ ಕಾಸರಗೋಡಿಗೆ ಆಗಮಿಸಿದ್ದರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.