ಕಾಸರಗೋಡು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕುತ್ತಿಕೋಲು ಎಂಬಲ್ಲಿ ನಡೆದಿದೆ. ಕುತ್ತಿ ಕೋಲಿನ ನೌಶಾದ್ ರವರ ಪುತ್ರ ಮುಹಮ್ಮದ್ ಬಿಲಾಲ್ (8) ಮೃತ ಪಟ್ಟ ಬಾಲಕ.
ಈತ ಕುತ್ತಿಕೋಲು ಎ ಯು ಪಿ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದನು. ಮನೆ ಸಮೀಪದ ಅಂಗಡಿಗೆ ತೆರಳಿ ಮರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯ ಗೊಂಡ ಬಾಲಕನನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.