News Karnataka Kannada
Thursday, May 02 2024
ಕಾಸರಗೋಡು

ಕಾಸರಗೋಡು: ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ, ಬಸ್ ನಿರ್ವಾಹಕನ ಬಂಧನ

Bus conductor arrested in student's suicide case
Photo Credit : By Author

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧ ಪಟ್ಟಂತೆ ಬಸ್ ನಿರ್ವಾಹಕನೋರ್ವನನ್ನು ಬೇಡಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುತ್ತಿಕೋಲ್  ಉಮೇಶ್ ಕುಮಾರ್ (30) ಬಂಧಿತ. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ 2 ವಿದ್ಯಾರ್ಥಿನಿ ಮಾಲಕುಂಡುವಿನ ಶರಣ್ಯ (17)ಳ ಆತ್ಮಹತ್ಯೆಗೆ ಸಂಬಂಧ ಪಟ್ಟಂತೆ ಈತನನ್ನು ಬಂಧಿಸಲಾಗಿದೆ.

ಮಾರ್ಚ್ 20 ರಂದು ಸಂಜೆ ಶರಣ್ಯ ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ  ಪತ್ತೆಯಾಗಿದ್ದಳು. ಈಕೆ ಬರೆದಿಟ್ಟಿದ್ದ ಆತ್ಮಹತ್ಯೆ ಪತ್ರವು ಶರಣ್ಯಳ ಕೋಣೆಯಿಂದ ಲಭಿಸಿತ್ತು. ಆತ್ಮಹತ್ಯೆ ಬಗ್ಗೆ ಮನೆಯವರು ಸಂಶಯ ವ್ಯಕ್ತಪಡಿಸಿದ್ದರು. ಮೃತ ದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.

ಮಾಹಿತಿ ಕಲೆ ಹಾಕಿದ ಪೊಲೀಸರು ತನಿಖೆ ನಡೆಸಿದ್ದರು. ಸೈಬರ್ ಸೆಲ್ ನ  ನೆರವಿನಿಂದ ತನಿಖೆ ನಡೆಸಿದ ಪೊಲೀಸರು ಆತ್ಮಹತ್ಯೆಗೆ ಪ್ರೇರಣೆಯಾದ  ಉಮೇಶ್ ಕುಮಾರ್ ನನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು