ಕಾಸರಗೋಡು: ಖಾಸಗಿ ಬಸ್ ಡಿಕ್ಕಿ ಹೊಡೆದು ಮಗು ಮೃತಪಟ್ಟ ಘಟನೆ ಚೆರ್ಕಳದಲ್ಲಿ ಶನಿವಾರ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ – ಸುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಮೃತಪಟ್ಟವನು.
ಜೊತೆಗಿದ್ದ ತಾಯಿ ಸುಬೈದಾ ಗಾಯಗೊಂಡಿದ್ದಾರೆ. ಚೆರ್ಕಳ ಬಸ್ಸು ನಿಲ್ದಾಣದಲ್ಲಿ ಬಸ್ಸು ಹಿಂದಕ್ಕೆ ತೆಗೆಯುತ್ತಿದ್ದಾಗ ಈ ಘಟನೆ ನಡೆದಿದೆ. ತಾಯಿ ಜೊತೆ ನಡೆದು ಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದನು.
ಮೃತದೇಹವನ್ನು ಕಾಸರಗೊಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ.