News Karnataka Kannada
Saturday, April 27 2024
ಕಾಸರಗೋಡು

ಕಾಸರಗೋಡು: ದಂತ ವೈದ್ಯರ ಸಾವಿನ ಪ್ರಕರಣ, ಐವರ ಬಂಧನ

Five arrested in connection with dentist's death
Photo Credit : By Author

ಕಾಸರಗೋಡು: ಬದಿಯಡ್ಕದ ದಂತ ವೈದ್ಯ ಡಾ.ಎಸ್.ಕೃಷ್ಣಮೂರ್ತಿ ರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.

ಈ ನಡುವೆ ಬದಿಯಡ್ಕ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಹರತಾಳ ಪೂರ್ಣವಾಗಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ.ವಿಶ್ವ ಹಿಂದೂ ಪರಿಷತ್ ನೇತತ್ವದಲ್ಲಿ ಬದಿಯಡ್ಕದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೃಷ್ಣಮೂರ್ತಿ ರವರ ಮೃತ ದೇಹವನ್ನು ಇಂದು ಮುಂಜಾನೆ ಬದಿಯಡ್ಕಕ್ಕೆ ತರಲಾಗಿತ್ತು ಬಳಿಕ ಮನೆಯ ಹಿತ್ತಿಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಲಿತುಪ್ಪಕಲ್,ಮುಹಮ್ಮದ್ ಹನೀಫ್,ಅಶ್ರಫ್, ಮುಹಮ್ಮದ್ ಮತ್ತು ಉಮ್ಮರುಲ್ ಫಾರೂಕ್ ಮೊದಲಾದವರನ್ನು ಬಂಧಿಸಲಾಗಿದೆ.

ಕ್ಲಿನಿಕ್ ಗೆ ತೆರಳಿ ಇವರು ವೈದ್ಯರಿಗೆ ಬೆದರಿಕೆವೊಡ್ಡಿದ್ದರು. ಮಂಗಳವಾರ ಘಟನೆ ನಡೆದಿತ್ತು.ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂಬ ಆರೋಪ ಘಟನೆಗೆ ಕಾರಣ ವಾಗಿತ್ತು. ಬೆದರಿಕೆ ಬಳಿಕ ಡಾ.ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲಿ ಬಿಟ್ಟು ಹೋಗಿದ್ದರು. ನಾಪತ್ತೆ ಕುರಿತು ಪತ್ನಿ ನೀಡಿದ ದೂರಿ ನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು.ಈ ನಡುವೆ ಕುಂದಾಪುರದ ರೈಲು ಹಳಿಯಲ್ಲಿ ವೈದ್ಯರ ಮೃತ ದೇಹ ಗುರುವಾರ ಪತ್ತೆಯಾಗಿತ್ತು.

ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಮೆರವಣಿಗೆ , ಬಸ್ಸು ನಿಲ್ದಾಣ ಪರಿಸರದಲ್ಲಿ ಕೊನೆಗೊಂಡಿತು.ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಸಂಘ ಪರಿವಾರ ಮುಖಂಡ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು,ಸುಧಾಮ ಗೋಸಾಡ, ಹರೀಶ್ ನಾರಂಪಾಡಿ,ಹರೀಶ್ ಪುತ್ರಕಳ ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು