ಕಾಸರಗೋಡು: ಹಿರಿಯ ಪತ್ರಕರ್ತ, ಕಾಸರಗೋಡು ಪ್ರೆಸ್ ಕ್ಲಬ್ ಮಾಜಿ ಕಾರ್ಯದರ್ಶಿ ಉಣ್ಣಿ ಕೃಷ್ಣನ್ ಪುಷ್ಪಗಿರಿ (64) ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೀನಿಯರ್ ಜರ್ನಲಿಸ್ಟ್ ಫೋರಂ ನ ಕಾಸರಗೋಡು ಜಿಲ್ಲಾ ಕೋಶಾಧಿಕಾರಿಯಾಗಿದ್ದರು. ಪಿ ಟಿ ಐ ಕಾಸರಗೋಡು ಜಿಲ್ಲಾ ವರದಿಗಾರ, ಉತ್ತರದೇಶಂ ಮಲಯಾಳ ದೈನಿಕದ ಉಪಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ನಾಟಕಗಳನ್ನು ಬರೆದಿದ್ದಾರೆ .
ಹಲವು ಮಾಧ್ಯಮ ಪ್ರಶಸ್ತಿಗಳು ಲಭಿಸಿವೆ. ಸಾಮಾಜಿಕ, ಸಾಂಸ್ಕೃತಿಕ ವಲಯಗಳಲ್ಲೂ ಸಕ್ರಿಯರಾಗಿದ್ದರು.
ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.