ಕಾಸರಗೋಡು: ಯುವತಿ ಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು.
ಬುಧವಾರದಂದು ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದಿವ್ಯಾ ಮಂಗಳವಾರ ರಾತ್ರಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆ ಮನೆಗೆ ಬಂದಿದ್ದರು. ತಾಯಿ ಹಾಗೂ ಮನೆ ಮಂದಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಕೃತ್ಯ ನಡೆದಿದೆ. ಸಂಜೆ ಪರಿಸರ ವಾಸಿಗಳು ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಈ ನಡುವೆ ಕೋಣೆಯಿಂದ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದೆ. ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕ ನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಆರಂಭಿಸದ್ದಾರೆ. ಯುವಕ ನಿರಂತರ ವಾಗಿ ಮೊಬೈಲ್ ನಲ್ಲಿ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ
ಮಾಧ್ಯಮವನ್ನು ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳನ್ನು ಮಾಡುತ್ತವೆ. ಸತ್ಯವನ್ನು…
ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್ಐಟಿ ಅಧಿಕಾರಿಗಳ ತಂಡ ಹಾಸನ…
ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ…
ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್ ಸಮೀಪ…
ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…