ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ನೇತೃತ್ವದಲ್ಲಿ ಗಡಿನಾಡ ಕನ್ನಡ ರಾಜ್ಯೋತ್ಸವ ಹಾಗೂ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವು ಡಿ.11 ಬೆಳಿಗ್ಗೆ ೧೦ ರಿಂದ ಕಾಸರಗೋಡು ಹೊಸ ಬಸ್ಸು ನಿಲ್ದಾಣ ಸಮೀಪದ ಸರ್ವೀಸ್ ಕೋ ಓಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಜರಗಲಿದೆ.
ಸಂಸದ ರಾಜಮೋಹನ ಉಣ್ಣಿತ್ತಾನ್ , ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಞಂಬು, ಎ.ಕೆ.ಅಶ್ರಫ್. ಹಿರಿಯ ಸಾಹಿತಿಗಳಾದ ರಮಾನಂದ ಬನಾರಿ ಸಹಿತ ಪ್ರಮುಖರು ಭಾಗವಹಿಸುವ ಸಮಾರಂಭದಲ್ಲಿ ಅಕಾಡೆಮಿಯು ಈ ಬಾರಿಯೂ ವಿವಿಧ ಕ್ಷೇತ್ರಗಳಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಿರುವ ಸಾಧಕರಾದ ಡಾ. ಆರತಿಕೃಷ್ಣ, ಶಿವಾನಂದ ತಗಡೂರು, ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್, ಪಟ್ಲ ಸತೀಶ್ ಶೆಟ್ಟಿ, ನಂದಳಿಕೆ ನಾರಾಯಣ ಶೆಟ್ಟಿ, ಡಾ.ಜನಾರ್ಧನ ನಾಯಕ್, ನ್ಯಾಯವಾದಿ ಮೊಹಮ್ಮದ್ ಆಸ್ಕರ್, ಗಂಗಾಧರ ಆಳ್ವ ಪೆರಡಾಲ ಹಾಗೂ ವಸಂತ ಆಳ್ವ ತಲೆಕಲ ಇವರನ್ನು ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಈ ಸಂದರ್ಭದಲ್ಲಿ ರಾಜ್ಯೋತ್ಸವ ಕವಿಗೋಷ್ಠಿ ಆಯೋಜಿಸಲಾಗಿದೆ.