ಕಾಸರಗೋಡು: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ.
ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಗೆ ಒಡೆಯಂಚಾಲ್ ಚೆರುಪ್ಪುಯದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಚೆರುಪ್ಪುಯ ಒಡೆಯಂಚಾಲ್ ನಲ್ಲಿ ರಸ್ತೆ ಮೇಲೆ ಗುಡ್ಡ ಜರಿದು ಬಿದ್ದಿದ್ದು, ಇದರಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮಣ್ಣು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ.
ಇನ್ನೊಂದೆಡೆ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದ ಘಟನೆಯೂ ನಡೆದಿದೆ. ಮನೆಗೆ ಭಾಗಶಃ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಹಾನಿಗೊಂಡಿದೆ.