ಕಾಸರಗೋಡು: ಬ್ಯೂಟಿಶಿಯನ್ ರೋರ್ವಳನ್ನು ವಸತಿಗ್ರಹದಲ್ಲಿ ಕೊಲೆಗೈದ ದಾರುಣ ಘಟನೆ ಮಂಗಳವಾರ ಸಂಜೆ ಕಾಞ೦ಗಾಡ್ ನಲ್ಲಿ ನಡೆದಿದೆ.
ಉದುಮ ಮಾಂಗಾಡ್ ನ ದೇವಿಕಾ ( ೩೪) ಕೊಲೆ ಗೀಡಾದವರು. ಕೃತ್ಯ ನಡೆಸಿದ ಬಳಿಕ ಈಕೆಯ ಪ್ರಿಯಕರ ನೆನ್ನಲಾದ ಯುವಕ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್ ( ೩೬) ಶರಣಾದ ಆರೋಪಿ. ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದನು. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಕೊಲೆ ಬಳಿಕ ಆರೋಪಿ ಕೊನೆಗೆ ಹೊರಗಿನಿಂದ ಬೀಗ ಜಡಿದು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ .
ಇಬ್ಬರ ನಡುವೆ ಕೌಟುಂಬಿಕ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು. ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದರು.
ಈ ನಡುವೆ ಮಧ್ಯಾಹ್ನ ದೇವಿಕಾಳನ್ನು ವಸತಿಗ್ರಹಕ್ಕೆ ಕರೆಸಿದ್ದು, ಬಳಿಕ ಈತ ಕೃತ್ಯ ನಡೆಸಿದ್ದಾನೆ.