ಕಾಸರಗೋಡು: ಸ್ಕೂಟರ್ ಮತ್ತು ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ನವವಿವಾಹಿತೆ ಮೃತಪಟ್ಟಿದ್ದು, ಪತಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆ ಗೆ ದಾಖಲಿಸಲಾಗಿದೆ.
ವಿದ್ಯಾನಗರ ಪನ್ನಿಪಾರೆಯ ಅಜೀಜ್ ರವರ ಪತ್ನಿ, ಉಪ್ಪಳ ಚೆಕ್ ಪೋಸ್ಟ್ ಸಮೀಪದ ಖದೀಜ (24) ಮೃತ ಪಟ್ಟವರು. ಪತಿ ಅಜೀಜ್(29) ಗಂಭೀರ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ಸಮೀಪ ಅಪಘಾತ ನಡೆದಿತ್ತು.
ಉಪ್ಪಳ ದಿಂದ ಕಾಸರಗೋಡಿಗೆ ತೆರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿತ್ತು. ಬಳಿಕ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಿಸಲಾಗಿತ್ತು. ಮೇ 4 ರಂದು ಇವರ ವಿವಾಹ ನಡೆದಿತ್ತು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.