News Karnataka Kannada
Monday, May 13 2024
ಕಾಸರಗೋಡು

ಕಾಸರಗೋಡು: ಎನ್ಐಎ ದಾಳಿ, ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

NIA raids, mixed reaction in the district
Photo Credit : By Author

ಕಾಸರಗೋಡು: ಪಿಎಫ್ಐ ಮುಖಂಡರ ಮನೆ, ಕಚೇರಿ ಮೇಲೆ ಎನ್ಐಎ ದಾಳಿ, ಮುಖಂಡರ ಬಂಧನ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಕೇರಳದಲ್ಲಿ ಕರೆ ನೀಡಿರುವ ಹರತಾಳಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ.

ಕುಂಬಳೆಯಲ್ಲಿ ಸರಕು ಲಾರಿ ಮೇಲೆ ಇಂದು ಬೆಳಿಗ್ಗೆ ಕಲ್ಲೆಸೆದ ಘಟನೆ ನಡೆದಿದ್ದು. ಉಳಿದಂತೆ ಮೊದಲ ಗಂಟೆಗಳಲ್ಲಿ ಹರತಾಳ ಶಾಂತಿಯುತವಾಗಿ ನಡೆಯುತ್ತಿದೆ.

ಕಾಸರಗೋಡು ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸೇರಿದಂತೆ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತ ಗೊಂಡಿದೆ. ಖಾಸಗಿ ವಾಹನಗಳು ಎಂದಿನಂತೆ ಸಂಚಾರ ನಡೆಸುತ್ತಿದೆ. ಬೆಳಿಗ್ಗೆ ಆರರಿಂದ ಸಂಜೆ ಆರರ ತನಕ ಹರತಾಳ ನಡೆಯಲಿದೆ. ಪ್ರಮುಖ ಕೇಂದ್ರಗಳಲ್ಲಿ ಹೊಸಂಗಡಿ, ಉಪ್ಪಳ, ಕಾಸರಗೋಡು ಮೊದಲಾದೆಡೆ ಪ್ರತಿ ಭಟನೆ ನಡೆಸಲಾಗುವುದು ಎಂದು ಪಿಎಫ್ಐ ಮುಖಂಡರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು