ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಮದ್ಯವನ್ನು ಕಾಸರಗೋಡು ಅಬಕಾರಿ ಅಧಿಕಾರಿಗಳು ವಶಪಡಿಸಿ ಕೊಂಡು ಓರ್ವನನ್ನು ಬಂಧಿಸಿದ್ದಾರೆ.
ಮಂಜೇಶ್ವರ ಕುಳೂರಿನ ನವೀನ್ ಶೆಟ್ಟಿ ( 35) ಬಂಧಿತ. ಕರ್ನಾಟಕ ದಿಂದ ಕಾಸರಗೋಡಿಗೆ ಅಕ್ರಮ ವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಅಬಕಾರಿ ದಳದ ಸಿಬ್ಬಂದಿಗಳು ವರ್ಕಾಡಿ ಅಳಂಬಿ ಎಂಬಲ್ಲಿಂದ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ.25 ಪೆಟ್ಟಿಗೆಗಳಲ್ಲಿ ಮದ್ಯವನ್ನು ಸಾಗಾಟ ಮಾಡಲಾಗುತ್ತಿತ್ತು.
ಇನ್ನೊಂದು ಪ್ರಕರಣ ದಲ್ಲಿ ಬದಿಯಡ್ಕದ ಪುತ್ರಕಳ ಎಂಬಲ್ಲಿಂದ ಬೈಕ್ ನಲ್ಲಿ ಸಾಗಾಟ ಮಾಡುತ್ತಿದ್ದ ಮದ್ಯ ವನ್ನು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡಿದ್ದಾರೆ. ಆರೋಪಿ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ .