ಕಾಸರಗೋಡು : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮತ್ತು ಧರಣಿ ನಡೆಸಲಾಯಿತು.
ಧರಣಿಯನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಕೆ. ಗಿರೀಶ್ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಜೊತೆ ಕಾರ್ಯದರ್ಶಿ ಸತ್ಯನ್ ಪೂಚಕ್ಕಾಡ್ , ಸಿ. ಎ ಮುಹಮ್ಮದ್ ಕುಂಞ, ಜಿಲ್ಲಾ ಕೋಶಾಧಿಕಾರಿ ಪಿ. ಎ ಮುಹಮ್ಮದ್ ಕುಂಞ, ಜಿಲ್ಲಾ ಜೊತೆ ಕಾರ್ಯದರ್ಶಿ ಶಂಕರ ನಾಯ್ಕ್ , ಹೊಸದುರ್ಗ ತಾಲೂಕು ಅಧ್ಯಕ್ಷ ಸಿ. ರವಿ , ರಾಜ್ಯ ಸಮಿತಿ ಸದಸ್ಯ ಎ.ವಿ ಪ್ರದೀಪ್ ಕುಮಾರ್ , ಜಿಲ್ಲಾ ಕಾರ್ಯದರ್ಶಿ ಟಿ. ಲಕ್ಷ್ಮಣ ಮೊದಲಾದವರು ಮಾತನಾಡಿದರು.