ಕಾಸರಗೋಡು: ಕಾಸರಗೋಡು ಶೈಕ್ಷಣಿಕ ಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಕನ್ನಡೇತರರನ್ನು ನೇಮಿಸಿದ ಕ್ರಮವನ್ನು ಪ್ರತಿಭಟಿಸಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ವತಿಯಿಂದ ಕಾಸರಗೋಡು ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಮಂಗಳವಾರ ಸತ್ಯಾಗ್ರಹ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾದ ಎಸ್.ವಿ.ಭಟ್ ಉದ್ಘಾಟಿಸಿದರು. ಕನ್ನಡ ಅಧ್ಯಾಪಕ ಸಂಘಟನೆಯ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದರು.ಹೋರಾಟ ಸಮಿತಿ ಕಾರ್ಯದರ್ಶಿ ಬಾಸ್ಕರ ಕುಂಬಳೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೇಂದ್ರಸಮಿತಿ ವಕ್ತಾರ ರವೀಂದ್ರನಾಥ ಕೆ.ಆರ್ ಮಾತನಾಡಿದರು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಪ್ರಶಾಂತ ಪಿ. ಸ್ವಾಗತಿಸಿದರು. ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕೇಂದ್ರ ಸಮಿತಿ ಕೋಶಾಧಿಕಾರಿ ಪದ್ಮಾವತಿ ಎಂ ನಿರೂಪಿಸಿದರು. ಕಾಸರಗೋಡು ಉಪಜಿಲ್ಲಾ ಕಾರ್ಯದರ್ಶಿ ಬಾಬು ಕೆ. ವಂದಿಸಿದರು.