ಕಾಸರಗೋಡು : ಕೆಎಸ್ಆರ್ ಟಿಸಿ ಬಸ್ಸು ಹರಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ನಗರದ ಎಂ.ಜಿ ರಸ್ತೆಯ ಹಳೆ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರು ಕಡವತ್ ಮೊಗರಿನ ಮುಹಮ್ಮದ್ ಫಾಸಿಲ್ ತಬ್ಸಿರ್ ( ೨೩) ಮೃತಪಟ್ಟವನು. ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.
ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ವಾಹನ ಒಮ್ಮೆಲೇ ಬ್ರೇಕ್ ಹಾಕಿದಾಗ ಸ್ಕೂಟರ್ ನಿಂದ ರಸ್ತೆಗೆಸೆಲ್ಪಟ್ಟ ಫಾಸಿಲ್ ತಬ್ಸಿರ್ ನ ಮೇಲೆ ಕೆ ಎಸ್ ಆರ್ ಟಿ ಸಿ ಬಸ್ಸಿನ ಹಿಂಬದಿ ಚಕ್ರ ಹರಿದು ಈ ದುರ್ಘಟನೆ ನಡೆದಿದೆ.
ಗಂಭೀರ ಗಾಯಗೊಂಡ ಸವಾರನನ್ನು ನಗರದ ಸರಕಾರಿ ಜನರಲ್ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು.
ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದು, ಅಪಘಾತಕ್ಕೆ ಕಾರಣವಾದ ಕೆಎಸ್ಆರ್ ಟಿಸಿ ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಶವಗಾರದಲ್ಲಿರಿಸಲಾಗಿದೆ. ಫಾಸಿಲ್ ತಬ್ಸಿರ್ ಮೊಗ್ರಾಲ್ ಪುತ್ತೂರಿನ ಬೇಕರಿಯೊಂದರ ನೌಕರನಾಗಿದ್ದನು.