News Karnataka Kannada
Sunday, May 12 2024
ಕಾಸರಗೋಡು

ಕಾಸರಗೋಡು: ಕೆಎಸ್ಆರ್ ಟಿಸಿ ಬಸ್ಸು ಹರಿದು ಸ್ಕೂಟರ್ ಸವಾರ ಮೃತ

Kasargod: Scooter rider dies after KSRTC bus runs over him
Photo Credit : By Author

ಕಾಸರಗೋಡು : ಕೆಎಸ್ಆರ್ ಟಿಸಿ ಬಸ್ಸು ಹರಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ನಗರದ ಎಂ.ಜಿ ರಸ್ತೆಯ ಹಳೆ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ.

ಮೊಗ್ರಾಲ್ ಪುತ್ತೂರು ಕಡವತ್ ಮೊಗರಿನ ಮುಹಮ್ಮದ್ ಫಾಸಿಲ್ ತಬ್ಸಿರ್ ( ೨೩) ಮೃತಪಟ್ಟವನು. ಮಧ್ಯಾಹ್ನ ೧೨ ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.

ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ವಾಹನ ಒಮ್ಮೆಲೇ ಬ್ರೇಕ್ ಹಾಕಿದಾಗ ಸ್ಕೂಟರ್ ನಿಂದ ರಸ್ತೆಗೆಸೆಲ್ಪಟ್ಟ ಫಾಸಿಲ್ ತಬ್ಸಿರ್ ನ ಮೇಲೆ ಕೆ ಎಸ್ ಆರ್ ಟಿ ಸಿ ಬಸ್ಸಿನ ಹಿಂಬದಿ ಚಕ್ರ ಹರಿದು ಈ ದುರ್ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ಸವಾರನನ್ನು ನಗರದ ಸರಕಾರಿ ಜನರಲ್ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು.

ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದು, ಅಪಘಾತಕ್ಕೆ ಕಾರಣವಾದ ಕೆಎಸ್ಆರ್ ಟಿಸಿ ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಶವಗಾರದಲ್ಲಿರಿಸಲಾಗಿದೆ. ಫಾಸಿಲ್ ತಬ್ಸಿರ್ ಮೊಗ್ರಾಲ್ ಪುತ್ತೂರಿನ ಬೇಕರಿಯೊಂದರ ನೌಕರನಾಗಿದ್ದನು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು