ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಸಾವಿರ ಲೀಟರ್ ಸ್ಪಿರಿಟ್ ನ್ನು ಡಿವೈಎಸ್ಪಿ ವಿ.ವಿ ಮನೋಜ್ ನೇತೃತ್ವದ ತಂಡವು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.
ಕುಂಜತ್ತೂರು ಅಣ್ಣಮಜಲಿನ ರವಿ ಕಿರಣ್ ( 31) ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಜೇಶ್ವರ ಬಳಿ ಸ್ಕಾರ್ಫಿಯೋ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸ್ಪಿರಿಟ್ ಪತ್ತೆಯಾಗಿದೆ. ಕ್ಯಾನ್ ಗಳಲ್ಲಿ ತುಂಬಿಸಿ ಸ್ಪಿರಿಟನ್ನು ಸಾಗಿಸಲಾಗುತ್ತಿತ್ತು.
ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.