ಕಾಸರಗೋಡು: ವಿಷಾಹಾರ ಸೇವನೆಯಿಂದ ವಿದ್ಯಾರ್ಥಿನಿ ಯೋರ್ವಳು ಮೃತಪಟ್ಟ ಘಟನೆ ಪೆರುಂಬಳ ಬೇನೂರಿನಲ್ಲಿ ನಡೆದಿದೆ.
ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( ೧೯) ಮೃತಪಟ್ಟ ವಿದ್ಯಾರ್ಥಿನಿ. ಹೋಟೆಲ್ ನಿಂದ ತರಿಸಿದ್ದ ಆಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದಳು.
ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಂದು ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗುವುದು . ಮೇಲ್ಪರಂಬ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆಹಾರವನ್ನು ನಗರ ಹೊರವಲಯದ ಅಡ್ಕತ್ತಬೈಲ್ ನ ಹೋಟೆಲೊಂದರಿಂದ ಖರೀದಿಸಿದ್ದಳು.
ವರದಿ ಕೇಳಿದ ಆರೋಗ್ಯ ಸಚಿವೆ
ವಿಷಹಾರ ಸೇವನೆ ಯಿಂದ ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆಯಲ್ಲಿ ಸಮಗ್ರ ತನಿಖೆಗೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆದೇಶ ನೀಡಿದ್ದಾರೆ . ಈ ಕುರಿತು ತುರ್ತು ವರದಿ ನೀಡುವಂತೆ ಆಹಾರ ಸುರಕ್ಷಾ ಆಯುಕ್ತರಿಗೆ ಆದೇಶ ನೀಡಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿಯವರಿಂದ ಸಚಿವರು ವರದಿ ನೀಡುವಂತೆ ಆದೇಶಿದ್ದಾರೆ.